Add parallel Print Page Options

ರಾಜ್ಯಪಾಲ ಪಿಲಾತನಿಂದ ಯೇಸುವಿನ ವಿಚಾರಣೆ

(ಮತ್ತಾಯ 27:1-2,11-14; ಮಾರ್ಕ 15:1-5; ಯೋಹಾನ 18:28-38)

23 ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು. ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.

ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.

ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.

ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.

Read full chapter