Add parallel Print Page Options

ಯೇಸು ಹೇಳಿದ ಬೀಜ ಬಿತ್ತುವವನ ಸಾಮ್ಯ

(ಮತ್ತಾಯ 13:1-17; ಮಾರ್ಕ 4:1-12)

ಅನೇಕ ಜನರು ಊರೂರುಗಳಿಂದ ಯೇಸುವಿನ ಬಳಿಗೆ ಸೇರಿಬಂದರು. ಆಗ ಯೇಸು ಅವರಿಗೆ ಈ ಸಾಮ್ಯ ಹೇಳಿದನು:

“ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು. ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು. ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ. ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.”

ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.

Read full chapter