Add parallel Print Page Options

ದೆವ್ವದಿಂದ ಪೀಡಿತನಾಗಿದ್ದವನಿಗೆ ವಿಮೋಚನೆ

(ಲೂಕ 4:31-37)

21 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು. 22 ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು. 23 ಯೇಸು ಸಭಾಮಂದಿರದಲ್ಲಿದ್ದಾಗ, ದೆವ್ವದಿಂದ ಪೀಡಿತನಾಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. ಅವನು, 24 “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.

25 ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು. 26 ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಅರಚುತ್ತಾ ಅವನೊಳಗಿಂದ ಹೊರಬಂದಿತು.

27 ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. 28 ಯೇಸುವಿನ ಸುದ್ದಿಯು ಗಲಿಲಾಯ ಪ್ರದೇಶದ ಎಲ್ಲೆಡೆಯಲ್ಲಿಯೂ ಹರಡಿತು.

Read full chapter