Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮಾರ್ಕ 14:1-26

ಯೇಸುವನ್ನು ಕೊಲ್ಲಲು ಯೆಹೂದ್ಯನಾಯಕರ ಯೋಜನೆ

(ಮತ್ತಾಯ 26:1-5; ಲೂಕ 22:1-2; ಯೋಹಾನ 11:45-53)

14 ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು. “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.

ಸ್ತ್ರೀಯೊಬ್ಬಳು ಯೇಸುವಿಗೆ ಮಾಡಿದ ವಿಶೇಷಕಾರ್ಯ

(ಮತ್ತಾಯ 26:6-13; ಯೋಹಾನ 12:1-8)

ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌[a] ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಅಲ್ಲಿದ್ದ ಕೆಲವು ಶಿಷ್ಯರು ಇದನ್ನು ನೋಡಿ ಕೋಪಗೊಂಡು ಆಕ್ಷೇಪಿಸಿದರು. “ಆ ಪರಿಮಳತೈಲವನ್ನು ಹಾಳುಮಾಡಿದ್ದೇಕೆ? ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.

ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು. ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ. ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು. ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.

ಯೇಸುವಿನ ವೈರಿಗಳಿಗೆ ಯೂದನ ಸಹಾಯ

(ಮತ್ತಾಯ 26:14-16; ಲೂಕ 22:3-6)

10 ನಂತರ ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಡಬೇಕೆಂಬ ದುರುದ್ದೇಶದಿಂದ ಮಹಾಯಾಜಕರೊಡನೆ ಮಾತಾಡಲು ಹೋದನು. 11 ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.

ಪಸ್ಕ ಭೋಜನದ ಸಿದ್ಧತೆ

(ಮತ್ತಾಯ 26:17-25; ಲೂಕ 22:7-14,21-23; ಯೋಹಾನ 13:21-30)

12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.

13 ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ. 14 ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಆ ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ. 15 ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.

16 ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.

17 ಸಾಯಂಕಾಲದಲ್ಲಿ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಆ ಮನೆಗೆ ಹೋದನು. 18 ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.

19 ಇದನ್ನು ಕೇಳಿದಾಗ ಶಿಷ್ಯರಿಗೆ ಬಹಳ ದುಃಖವಾಯಿತು. ಪ್ರತಿಯೊಬ್ಬ ಶಿಷ್ಯನೂ ಯೇಸುವಿಗೆ, “ಖಂಡಿತವಾಗಿ ನಾನು ನಿನಗೆ ದ್ರೋಹಮಾಡುವುದಿಲ್ಲ” ಎಂದನು.

20 ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ. 21 ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.

ಪ್ರಭುವಿನ ಭೋಜನ

(ಮತ್ತಾಯ 26:26-30; ಲೂಕ 22:15-20; 1 ಕೊರಿಂಥ. 11:23-25)

22 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.

23 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು. 24 ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ. 25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.

26 ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International