Old/New Testament
ಯೆಹೂದ್ಯ ಸೆರೆಯಾಳುಗಳು ಹಿಂತಿರುಗಿ ಹೋಗಲು ಸೈರಸನ ಸಹಾಯ
1 ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ[a] ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:
2 “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ:
“ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ. 3 ಆತನು ಜೆರುಸಲೇಮ್ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ. 4 ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”
5 ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು. 6 ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು. 7 ಅಲ್ಲದೆ ಸೈರಸ್ ರಾಜನು ದೇವಾಲಯಕ್ಕೆ ಸಂಬಂಧಿಸಿದ ವಸ್ತುಗಳನ್ನೆಲ್ಲಾ ಹೊರತೆಗೆದನು. ನೆಬೂಕದ್ನೆಚ್ಚರ ಅರಸನು ಜೆರುಸಲೇಮ್ ದೇವಾಲಯದಿಂದ ಸೂರೆಮಾಡಿ ತಂದ ಸಾಮಾಗ್ರಿಗಳನ್ನು ತನ್ನ ವಿಗ್ರಹಗಳನ್ನಿಡುವ ಕೋಣೆಯಲ್ಲಿ ಇಟ್ಟಿದ್ದನು. 8 ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.
9 ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29 10 ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000.
11 ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.
ಹಿಂತಿರುಗಿಹೋದ ಸೆರೆಯವರು
2 ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು. 2 ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:
3 ಪರೋಷಿನ ಸಂತತಿಯವರು | 2,172 |
4 ಶೆಫಟ್ಯನ ಸಂತತಿಯವರು | 372 |
5 ಅರಹನ ಸಂತತಿಯವರು | 775 |
6 ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು | 2,812 |
7 ಏಲಾಮಿನ ಸಂತತಿಯವರು | 1,254 |
8 ಜತ್ತೂವಿನ ಸಂತತಿಯವರು | 945 |
9 ಜಕ್ಕೈಯ ಸಂತತಿಯವರು | 760 |
10 ಬಾನೀಯ ಸಂತತಿಯವರು | 642 |
11 ಬೇಬೈಯ ಸಂತತಿಯವರು | 623 |
12 ಅಜ್ಗಾದಿನ ಸಂತತಿಯವರು | 1,222 |
13 ಅದೋನೀಕಾಮನ ಸಂತತಿಯವರು | 666 |
14 ಬಿಗ್ವೈಯ ಸಂತತಿಯವರು | 2,056 |
15 ಆದೀನನ ಸಂತತಿಯವರು | 454 |
16 ಆಟೇರಿನವರಾದ ಹಿಜ್ಕೀಯನ ಸಂತತಿಯವರು | 98 |
17 ಬೇಚೈಯ ಸಂತತಿಯವರು | 323 |
18 ಯೋರನ ಸಂತತಿಯವರು | 112 |
19 ಹಾಷುಮಿನ ಸಂತತಿಯವರು | 223 |
20 ಗಿಬ್ಬಾರಿನ ಸಂತತಿಯವರು | 95 |
21 ಬೆತ್ಲೆಹೇಮಿನ ಊರಿನವರು | 123 |
22 ನೆಟೋಫ ಊರಿನವರು | 56 |
23 ಅನಾತೋತ್ ಊರಿನವರು | 128 |
24 ಅಜ್ಮಾವೆತ್ ಊರಿನವರು | 42 |
25 ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು | 743 |
26 ರಾಮಾ ಮತ್ತು ಗೆಬ ಊರುಗಳವರು | 621 |
27 ಮಿಕ್ಮಾಸಿನವರು | 122 |
28 ಬೇತೇಲ್ ಮತ್ತು ಆಯಿ ಎಂಬ ಊರುಗಳವರು | 223 |
29 ನೆಬೋ ಊರಿನವರು | 52 |
30 ಮಗ್ಬೀಷ್ ಊರಿನವರು | 156 |
31 ಏಲಾಮ್ ಎಂಬ ಮತ್ತೊಂದು ಊರಿನವರು | 1,254 |
32 ಹಾರಿಮ್ ಊರಿನವರು | 320 |
33 ಲೋದ್, ಹಾದೀದ್, ಓನೋ ಊರುಗಳವರು | 725 |
34 ಜೆರಿಕೊ ಊರಿನವರು | 345 |
35 ಸೆನಾಹ ಊರಿನವರು | 3,630 |
36 ಯಾಜಕರು ಯಾರೆಂದರೆ:
ಯೇಷೂವನ ಕುಟುಂಬಕ್ಕೆ ಸೇರಿದ ಯೆದಾಯನ ಸಂತತಿಯವರು | 973 |
37 ಇಮ್ಮೇರನ ಸಂತತಿಯವರು | 1,052 |
38 ಪಷ್ಹೂರನ ಸಂತತಿಯವರು | 1,247 |
39 ಹಾರಿಮನ ಸಂತತಿಯವರು | 1,017 |
40 ಲೇವಿ ಕುಲದವರು ಯಾರೆಂದರೆ:
ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು | 74 |
41 ಗಾಯಕರು ಯಾರೆಂದರೆ:
ಆಸಾಫನ ಸಂತತಿಯವರು | 128 |
42 ದ್ವಾರಪಾಲಕರು ಯಾರೆಂದರೆ:
ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು | 139 |
43 ದೇವಾಲಯದ ವಿಶೇಷ ಸೇವಕರು ಯಾರೆಂದರೆ:
ಜೀಹ, ಹಸೂಫ, ಟಬ್ಬಾವೋತ್,
44 ಕೇರೋಸ್, ಸೀಯಹಾ, ಪಾದೋನ್,
45 ಲೆಬಾನ, ಹಗಾಬ, ಅಕ್ಕೂಬ್,
46 ಹಾಗಾಬ್, ಶೆಮ್ಲೈ, ಹಾನಾನ್,
47 ಗಿದ್ದೇಲ್, ಗಹರ್, ರೆವಾಯ,
48 ರೆಚೀನ್, ನೆಕೋದ, ಗಜ್ಜಾಮ್,
49 ಉಜ್ಜ, ಪಾಸೇಹ, ಬೇಸೈ,
50 ಅಸ್ನ, ಮೆಗೂನೀಮ್, ನೆಫೀಸೀಮ್,
51 ಬಕ್ಬೂಕ್, ಹಕ್ಕೂಫ, ಹರ್ಹೂರ್,
52 ಬಚ್ಲೂತ್, ಮೆಹೀದ, ಹರ್ಷ,
53 ಬರ್ಕೋಸ್, ಸೀಸೆರ, ತೆಮಹ,
54 ನೆಚೀಹ, ಹಟೀಫ ಇವರ ಸಂತತಿಯವರು.
55 ಸೊಲೊಮೋನನ ಸೇವಕರ ಸಂತತಿಯವರು:
ಸೋಟೈ, ಹಸ್ಸೋಫೆರೆತ್, ಪೆರೂಧ,
56 ಯಾಲ, ದರ್ಕೋನ್, ಗಿದ್ದೇಲ್,
57 ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೀ ಇವರ ಸಂತತಿಯವರು.
58 ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ | 392 |
59-60 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ:
ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು | 652 |
61 ಯಾಜಕರಾದ ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
62 ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು. 63 ಊರೀಮ್ ತುಮ್ಮೀಮ್ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.
64-65 ಹೀಗೆ ಒಟ್ಟು ನಲವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮುನ್ನೂರ ಮೂವತ್ತೇಳು ಸೇವಕಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕಗಾಯಕಿಯರೂ ಇದ್ದರು. 66-67 ಅವರ ಬಳಿಯಲ್ಲಿ ಏಳುನೂರ ಮೂವತ್ತಾರು ಕುದುರೆಗಳು, ಇನ್ನೂರ ನಲವತ್ತೈದು ಹೇಸರಕತ್ತೆಗಳು, ನಾನೂರ ಮೂವತ್ತೈದು ಒಂಟೆಗಳು ಮತ್ತು ಆರು ಸಾವಿರದ ಏಳುನೂರ ಇಪ್ಪತ್ತು ಕತ್ತೆಗಳೂ ಇದ್ದವು.
68 ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು. 69 ದೇವಾಲಯ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.
70 ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.
23 ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. 24 ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು.
“ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು;
ನನ್ನ ಅಂಗಿಗಾಗಿ ಚೀಟಿ ಹಾಕಿದರು”(A)
ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು.
25 ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿಯಾದ ಮರಿಯಳು ಮತ್ತು ಮಗ್ದಲದ ಮರಿಯಳು ಶಿಲುಬೆಯ ಬಳಿಯಲ್ಲಿ ನಿಂತುಕೊಂಡಿದ್ದರು. 26 ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು. 27 ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು.
ಯೇಸುವಿನ ಮರಣ
(ಮತ್ತಾಯ 27:45-56; ಮಾರ್ಕ 15:33-41; ಲೂಕ 23:44-49)
28 ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ”[a] ಎಂದು ಹೇಳಿದನು. 29 ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು. 30 ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.
31 ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್ದಿನವಾಗಿತ್ತು. ಸಬ್ಬತ್ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು. 32 ಆದ್ದರಿಂದ ಸೈನಿಕರು ಬಂದು ಯೇಸುವಿನೊಂದಿಗೆ ಶಿಲುಬೆಗೇರಿಸಲ್ಪಟ್ಟಿದ್ದ ಇಬ್ಬರ ಕಾಲುಗಳನ್ನು ಮುರಿದುಹಾಕಿದರು. 33 ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.
34 ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು. 35 (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.) 36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ”(B) ಎಂಬ ಮಾತು ಹೀಗೆ ನೆರವೇರಿತು. 37 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ, “ಜನರು ತಾವು ಈಟಿಯಿಂದ ಇರಿದವನನ್ನೇ ದಿಟ್ಟಿಸಿ ನೋಡುವರು”(C) ಎಂತಲೂ ಬರೆದಿದೆ.
ಯೇಸುವಿನ ಶವಸಂಸ್ಕಾರ
(ಮತ್ತಾಯ 27:57-61; ಮಾರ್ಕ 15:42-47; ಲೂಕ 23:50-56)
38 ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.
39 ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಆ ಸುಗಂಧದ್ರವ್ಯವು ರಕ್ತ ಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು. 40 ಈ ಇಬ್ಬರು ಯೇಸುವಿನ ದೇಹವನ್ನು ತೆಗೆದುಕೊಂಡು ಅದಕ್ಕೆ ಸುಗಂಧದ್ರವ್ಯವನ್ನು ಹಾಕಿ ನಾರುಬಟ್ಟೆಗಳಿಂದ ಸುತ್ತಿದರು. (ಯೆಹೂದ್ಯರು ಸತ್ತವರನ್ನು ಇದೇರೀತಿ ಸಮಾಧಿ ಮಾಡುತ್ತಾರೆ.) 41 ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ. 42 ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.
Kannada Holy Bible: Easy-to-Read Version. All rights reserved. © 1997 Bible League International