Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 34:1-8

ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

[a]34 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು.
    ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು
    ಕೇಳಿ ಸಂತೋಷಪಡಿರಿ.
ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ.
    ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.
ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು.
    ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.[b]
    ಅವರಿಗೆ ಆಶಾಭಂಗವಾಗದು.
ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು
    ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.
ಯೆಹೋವನ ಭಕ್ತರ ಸುತ್ತಲೂ ಆತನ ದೂತನು
    ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.
ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ.
    ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.

1 ರಾಜರುಗಳು 2:1-9

ದಾವೀದ ರಾಜನ ಮರಣ

ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ, “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು. ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ. ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”

“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು. ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”

“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.

“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು. ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.

ಮತ್ತಾಯ 7:7-11

ಪ್ರಾರ್ಥನೆಯ ಪ್ರತಿಫಲ

(ಲೂಕ 11:9-13)

“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು. ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.

“ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೋ? 10 ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೋ? 11 ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International