Revised Common Lectionary (Complementary)
15 ಯೆಹೋವನು ನೀತಿವಂತರನ್ನು ಕಾಪಾಡುವನು.
ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.
16 ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು.
ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.
17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು;
ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.
18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ;
ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.
19 ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ
ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.
20 ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು.
ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು.
ನೀತಿವಂತರ ವೈರಿಗಳು ನಾಶವಾಗುವರು.
22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು.
ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.
10 ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು. 11 ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು. 12 ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು.
13-14 ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.
15 ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು: 16 “ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನೆಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ. 17 ಪೆಗೋರ್ನಲ್ಲಿ ಏನಾಯಿತೆಂಬುದನ್ನು ಸ್ಮರಿಸಿಕೊಳ್ಳಿ ಆ ಪಾಪಕ್ಕಾಗಿ ನಾವು ಇನ್ನೂ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ದೇವರು ನಮ್ಮಲ್ಲಿ ಬಹಳಷ್ಟು ಜನರನ್ನು ರೋಗಗ್ರಸ್ತರನ್ನಾಗಿ ಮಾಡಿದನು. ಆ ರೋಗದಿಂದ ಇಂದಿಗೂ ನಾವು ಕಷ್ಟಪಡುತ್ತಿದ್ದೇವೆ. 18 ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.
19 “‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.
20 “‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು.
11 ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ. 12 “ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು. 13 ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು. 14 ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
Kannada Holy Bible: Easy-to-Read Version. All rights reserved. © 1997 Bible League International