Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 106:1-6

106 ಯೆಹೋವನನ್ನು ಸ್ತುತಿಸಿರಿ!
ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
    ಆತನ ಪ್ರೀತಿಯು ಶಾಶ್ವತವಾದದ್ದು!
ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು;
    ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.
ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ!
    ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.

ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು.
    ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.
ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ
    ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ.
ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು.
    ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.

ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು.
    ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!

ಕೀರ್ತನೆಗಳು 106:13-23

13 ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು;
    ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.
14 ನಮ್ಮ ಪೂರ್ವಿಕರು ಮರಳುಗಾಡಿನಲ್ಲಿ
    ಆಶಾತುರರಾಗಿ ಆತನನ್ನು ಪರೀಕ್ಷಿಸಿದರು.
15 ಆತನು ಅವರ ಆಸೆಯನ್ನು ಪೂರೈಸಿದರೂ
    ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು.
16 ಅವರು ಮೋಶೆಯ ಮೇಲೆಯೂ
    ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.
17 ಭೂಮಿಯು ಬಾಯ್ದೆರೆದು ಹೊಟ್ಟೆಕಿಚ್ಚುಪಟ್ಟ ದಾತಾನನನ್ನೂ
    ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು.
18 ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು;
    ಅಗ್ನಿಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.
19 ಹೋರೇಬ್ ಬೆಟ್ಟದ ಬಳಿಯಲ್ಲಿ
    ಅವರು ಚಿನ್ನದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.
20 ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ
    ಅವರು ಮಹಿಮಾಸ್ವರೂಪನಾದ ದೇವರನ್ನೇ ಬಿಟ್ಟುಕೊಟ್ಟರು!
21 ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು!
    ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.
22 ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು.
    ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!

23 ಆತನು ಅವರನ್ನು ನಾಶಮಾಡಬೇಕೆಂದಿದ್ದನು.
    ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ
    ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಕೀರ್ತನೆಗಳು 106:47-48

47 ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು!
    ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು.
ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ
    ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
48 ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ.
    ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ.
“ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!”
    ಎಂದು ಜನರೆಲ್ಲರೂ ಹೇಳಲಿ.

ಧರ್ಮೋಪದೇಶಕಾಂಡ 4:15-20

15 “ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ. 16 ಆದ್ದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲಿ 17 ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ ಭೂಮಿಯ ಮೇಲೆ ಸಂಚರಿಸುವ ಪ್ರಾಣಿಯ ರೂಪವನ್ನಾಗಲಿ 18 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ನೀರಿನಲ್ಲಿ ಈಜಾಡುವ ಮೀನುಗಳ ರೂಪವನ್ನಾಗಲಿ ಮಾಡಿಕೊಳ್ಳಬೇಡಿ. 19 ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು. 20 ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.

1 ಪೇತ್ರನು 2:19-25

19 ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ. 20 ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ. 21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.

22 “ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ.
    ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”(A)

23 ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ. 24 ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು. 25 ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International