Revised Common Lectionary (Complementary)
ರಚನೆಗಾರ: ದಾವೀದ.
26 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು.
ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.
2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ.
ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ.
ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ.
ನಾನು ಕಪಟಿಗಳ ಜೊತೆ ಸೇರುವವನಲ್ಲ.
5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ.
ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.
6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ[a] ಸುತ್ತಲೂ ನಡೆಯಲು
ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.
7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.
ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ
ನನಗೆ ಎಷ್ಟೋ ಪ್ರಿಯವಾಗಿವೆ.
ಯೆರೆಮೀಯನು ಪುನಃ ದೇವರಲ್ಲಿ ದೂರುತ್ತಾನೆ
10 ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ
ನನಗೆ ದುಃಖವಾಗುತ್ತದೆ.
ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ
ವಾದಿಸುತ್ತಾ ನಿಂದಿಸುತ್ತಾ ಇರುವೆ.
ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ.
ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.
11 ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ.
ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.[a]
ಯೆರೆಮೀಯನಿಗೆ ದೇವರ ಉತ್ತರ
12 “ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು
ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು.
ಉತ್ತರದಿಂದ[b] ಬರುವವನು ಕಬ್ಬಿಣದಂತಿದ್ದಾನೆ.
13 ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ.
ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ.
ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ.
ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ.
ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ.
ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.
14 ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು.
ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು.
ನನಗೆ ಅತಿಕೋಪ ಬಂದಿದೆ.
ನನ್ನ ಕೋಪವು ಜ್ವಾಲೆಯಂತಿದೆ.
ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”
ಗುಣಮುಖರಾದ ವಿವಿಧ ಜನರು
(ಮಾರ್ಕ 1:29-34; ಲೂಕ 4:38-41)
14 ಯೇಸುವು ಪೇತ್ರನ ಮನೆಗೆ ಹೋದನು. ಅಲ್ಲಿ ಪೇತ್ರನ ಅತ್ತೆಯು ಬಹಳ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದನ್ನು ಯೇಸು ನೋಡಿದನು. 15 ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.
16 ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
17 “ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು”(A)
ಎಂದು ಪ್ರವಾದಿಯಾದ ಯೆಶಾಯನು ಹೇಳಿದ್ದು ಇದರ ಮೂಲಕ ನೆರವೇರಿತು.
Kannada Holy Bible: Easy-to-Read Version. All rights reserved. © 1997 Bible League International