Revised Common Lectionary (Complementary)
ರಚನೆಗಾರರು: ಕೋರಹೀಯರು.
49 ಸರ್ವಜನಾಂಗಗಳೇ, ಕೇಳಿರಿ,
ಭೂನಿವಾಸಿಗಳೆಲ್ಲರೇ, ಆಲಿಸಿರಿ.
2 ಸಾಮಾನ್ಯ ಜನರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ.
3 ನಾನು ನಿಮಗೆ ಸುಜ್ಞಾನವನ್ನೂ
ವಿವೇಕವನ್ನೂ ಬೋಧಿಸುವೆನು.
4 ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ.
ನಾನು ಹಾರ್ಪ್ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.
5 ಆಪತ್ತು ಬಂದಾಗ ನಾನೇಕೆ ಭಯಪಡಬೇಕು?
ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?
6 ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ;
ಅವರು ಬುದ್ಧಿಹೀನರಾಗಿದ್ದಾರೆ.
7 ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು.
ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು.
8 ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು
ಹಣ ಯಾವನಿಗೂ ದೊರೆಯುವುದಿಲ್ಲ.
9 ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು
ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು
ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.
10 ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು.
ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.
11 ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ.
ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.
12 ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು.
ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು.
—19—
24 ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ. 2 ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.
—20—
3 ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು. 4 ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ.
—21—
5 ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ. 6 ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.
—22—
7 ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.
—23—
8 ಕೇಡುಮಾಡುವವನನ್ನು ಜನರು “ಕೆಡುಕ” ಎಂದು ಕರೆಯುವರು. 9 ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ.
—24—
10 ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ.
—25—
11 ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು. 12 “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.
ನೀವು ಜೀವಿಸಬೇಕಾದ ರೀತಿ
17 ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ. 18 ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ. 19 ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಕೃತ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ. 20 ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ. 21 ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ. 22 ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ. 23 ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.
Kannada Holy Bible: Easy-to-Read Version. All rights reserved. © 1997 Bible League International