Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 113

113 ಯೆಹೋವನಿಗೆ ಸ್ತೋತ್ರವಾಗಲಿ!
ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ!
    ಆತನ ಹೆಸರನ್ನು ಕೊಂಡಾಡಿರಿ.
ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ.
ಪೂರ್ವದಿಂದಿಡಿದು ಪಶ್ಚಿಮದವರೆಗೂ
    ಯೆಹೋವನ ಹೆಸರು ಸ್ತುತಿಸಲ್ಪಡಲಿ.
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ;
    ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.
ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ.
    ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.
ಆತನು ಆಕಾಶವನ್ನೂ
    ಭೂಮಿಯನ್ನೂ ಬಾಗಿ ನೋಡುವನು.
ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು;
    ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.
ಆತನು ಅವರನ್ನು ಪ್ರಮುಖರನ್ನಾಗಿಯೂ
    ನಾಯಕರುಗಳನ್ನಾಗಿಯೂ ಮಾಡುವನು.
ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ
    ಸಂತೋಷಪಡಿಸುವನು.

ಯೆಹೋವನಿಗೆ ಸ್ತೋತ್ರವಾಗಲಿ!

ವಿಮೋಚನಕಾಂಡ 23:1-9

23 “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.

“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.

“ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.

“ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲೀಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲೀಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.

“ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.

“ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.

“ನೀವು ಮೋಸದ ಕಾರ್ಯಕ್ಕೆ ದೂರವಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಕೂಡದು. ಅಂಥ ದುಷ್ಟಕಾರ್ಯ ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸೇ ವಿಧಿಸುವೆನು.

“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯ ಮಾಡುತ್ತದೆ.

“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ರೋಮ್ನಗರದವರಿಗೆ 3:1-8

ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ? ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು. ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ? ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ:

“ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು.
    ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”(A)

ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.) ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.

“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು. “ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International