Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 5:1-8

ರಚನೆಗಾರ: ದಾವೀದ.

ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು.
    ನನ್ನ ಆಲೋಚನೆಗಳಿಗೆ ಗಮನಕೊಡು.
ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು.
    ನನ್ನ ಪ್ರಾರ್ಥನೆಯನ್ನು ಆಲೈಸು.
ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು;
    ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.

ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ.
    ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.
ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು;
    ದುಷ್ಟರನ್ನು ನೀನು ದ್ವೇಷಿಸುವೆ.
ಸುಳ್ಳಾಡುವವರನ್ನು ನೀನು ನಾಶಪಡಿಸುವೆ.
    ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.

ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು,
    ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.
ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ
    ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ,
ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.

1 ರಾಜರುಗಳು 20:23-34

ಬೆನ್ಹದದನ ಮರು ಆಕ್ರಮಣ

23 ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ. 24 ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ. 25 ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಆ ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ” ಎಂದು ಹೇಳಿದರು. ಬೆನ್ಹದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು.

26 ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.

27 ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.

28 ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”

29 ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು. 30 ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು. 31 ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.

32 ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು’” ಎಂದರು.

ಅಹಾಬನು, “ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.

33 ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು.

ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.

34 ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು.

ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.

ರೋಮ್ನಗರದವರಿಗೆ 11:1-10

ದೇವರು ತನ್ನ ಜನರನ್ನು ಮರೆತಿಲ್ಲ

11 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ. ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ. ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ”(A) ಎಂದು ಪ್ರಾರ್ಥಿಸಿದನು. ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ”(B) ಎಂದು ಉತ್ತರಕೊಟ್ಟನು.

ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ. ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.

ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು:

“ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.”(C)

“ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ
    ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.”(D)

ದಾವೀದನು ಹೀಗೆನ್ನುತ್ತಾನೆ:

“ಅವರು ತಮ್ಮ ಔತಣಗಳಲ್ಲಿ ಸಿಕ್ಕಿಕೊಂಡು ಬಂಧಿತರಾಗಲಿ;
    ಎಡವಿಬಿದ್ದು ದಂಡನೆ ಹೊಂದಲಿ.
10 ಅವರ ಕಣ್ಣು ಕುರುಡಾಗಲಿ;
    ನಿರಂತರ ಭಾರದಿಂದ ಬೆನ್ನು ಗೂನಾಗಲಿ.”(E)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International