Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 102:1-17

ಹಿಂಸೆ ಸಂಕಟಗಳಲ್ಲಿರುವವನ ಪ್ರಾರ್ಥನೆ.

102 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು.
    ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.
ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು.
    ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ.
    ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.
ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ.
    ನಾನು ಊಟವನ್ನೂ ಮರೆತುಬಿಡುವೆನು.
ದೀರ್ಘ ದುಃಖದಿಂದಾಗಿ
    ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.
ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ.
    ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.
ನನಗೆ ನಿದ್ರೆಯೂ ಬಾರದು.
    ಮೇಲ್ಛಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.
ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು.
    ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.
ನನ್ನ ದುಃಖವೇ ನನಗೆ ಆಹಾರವಾಯಿತು.
    ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.
10 ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ.
    ನೀನು ನನ್ನನ್ನು ಮೇಲೆತ್ತಿ ಎಸೆದುಬಿಟ್ಟೆಯಲ್ಲಾ!

11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ.
    ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.
12 ಯೆಹೋವನೇ, ನೀನಾದರೋ ಎಂದೆಂದಿಗೂ ಜೀವಿಸುವೆ!
    ನಿನ್ನ ಹೆಸರು ಶಾಶ್ವತವಾದದ್ದು!
13 ನೀನು ಎದ್ದು ಚೀಯೋನನ್ನು ಸಂತೈಸುವೆ.
    ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.
14 ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು.
    ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!
15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ.
    ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.
16 ಯಾಕೆಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು.
    ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.
17 ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು.
    ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.

ಜ್ಞಾನೋಕ್ತಿಗಳು 3:5-12

ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ. ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು. ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು. ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.

ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು. 10 ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.

11 ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ. 12 ತಂದೆಯು ತನ್ನ ಮಗನನ್ನು ಗದರಿಸುವಂತೆಯೇ ಯೆಹೋವನು ತಾನು ಪ್ರೀತಿಸುವವರನ್ನು ಶಿಕ್ಷಿಸುತ್ತಾನೆ.

ಅಪೊಸ್ತಲರ ಕಾರ್ಯಗಳು 7:44-56

44 “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು[a] ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು. 45 ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು. 46 ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು. 47 ಆದರೆ ದೇವಾಲಯವನ್ನು ಕಟ್ಟಿದ್ದು (ದಾವೀದನ ಮಗನಾದ) ಸೊಲೊಮೋನನೇ.

48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:

49 ‘ಪ್ರಭುವು ಹೀಗೆನ್ನುತ್ತಾನೆ,
ಪರಲೋಕವು ನನ್ನ ಸಿಂಹಾಸನ.
    ಭೂಮಿಯು ನನ್ನ ಪಾದಪೀಠ.
ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ?
    ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
50 ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’(A)

51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ! 52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ. 53 ದೇವರು ತನ್ನ ದೂತರ ಮೂಲಕ ಕೊಟ್ಟ ಮೋಶೆಯ ಧರ್ಮಶಾಸ್ತ್ರವನ್ನು ಪಡೆದುಕೊಂಡ ನೀವೇ ಅದಕ್ಕೆ ವಿಧೇಯರಾಗುವುದಿಲ್ಲ!”

ಸ್ತೆಫನನು ಕೊಲ್ಲಲ್ಪಟ್ಟನು

54 ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು. 55 ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು, 56 “ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International