Revised Common Lectionary (Semicontinuous)
ಐದನೆಯ ಭಾಗ
(ಕೀರ್ತನೆಗಳು 107–150)
107 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು!
ಆತನ ಪ್ರೀತಿ ಶಾಶ್ವತವಾದದ್ದು!
2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ.
ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು;
ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
17 ಕೆಲವರು ತಮ್ಮ ಪಾಪಗಳಿಂದಲೂ
ದೋಷಗಳಿಂದಲೂ ಮೂಢರಾದರು.
18 ಆ ಜನರು ಊಟವನ್ನು ನಿರಾಕರಿಸಿದ್ದರಿಂದ
ಮರಣಾವಸ್ಥೆಗೆ ಬಂದರು.
19 ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು.
ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
20 ಆತನು ಆಜ್ಞಾಪಿಸಲು ಜನರು ಗುಣಹೊಂದಿದರು.
ಸಮಾಧಿಯಿಂದ ತಪ್ಪಿಸಿಕೊಂಡರು.
21 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ
ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
22 ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ.
ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.
ಆರೋನನ ಮರಣ
22 ಇಸ್ರೇಲರೆಲ್ಲರೂ ಕಾದೇಶಿನಿಂದ ಹೊರಟು ಹೋರ್ ಬೆಟ್ಟಕ್ಕೆ ಹೋದರು. 23 ಹೋರ್ ಬೆಟ್ಟವು ಎದೋಮ್ಯರ ಗಡಿಯ ಬಳಿಯಲ್ಲಿ ಇತ್ತು. ಯೆಹೋವನು ಮೋಶೆ ಆರೋನರಿಗೆ, 24 “ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
25 “ಈಗ ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ. 26 ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು.
27 ಮೋಶೆಯು ಯೆಹೋವನ ಅಪ್ಪಣೆಗೆ ವಿಧೇಯನಾದನು. ಮೋಶೆ, ಆರೋನ ಮತ್ತು ಎಲ್ಲಾಜಾರ ಇವರು ಹೋರ್ ಬೆಟ್ಟವನ್ನು ಹತ್ತಿದರು. ಅವರು ಹೋಗುತ್ತಿರುವುದನ್ನು ಇಸ್ರೇಲರೆಲ್ಲರೂ ನೋಡಿದರು. 28 ಮೋಶೆಯು ಆರೋನನ ಪ್ರತಿಷ್ಠಿತಾ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು. 29 ಆರೋನನು ಸತ್ತನೆಂದು ಇಸ್ರೇಲರೆಲ್ಲರಿಗೆ ತಿಳಿಯಿತು. ಆದ್ದರಿಂದ ಇಸ್ರೇಲಿನಲ್ಲಿ ಪ್ರತಿಯೊಬ್ಬನೂ ಆರೋನನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದನು.
ಯೇಸು ಮತ್ತು ನಿಕೊದೇಮ
3 ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು. 2 ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.
3 ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.
4 ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.
5 ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು. 6 ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು. 7 ‘ನೀನು ಹೊಸದಾಗಿ ಹುಟ್ಟಲೇಬೇಕು’ ಎಂದು ನಾನು ಹೇಳಿದ್ದಕ್ಕೆ ಆಶ್ಚರ್ಯಪಡಬೇಡ. 8 ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.
9 ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.
10 ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ? 11 ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ. 12 ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ! 13 ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.
Kannada Holy Bible: Easy-to-Read Version. All rights reserved. © 1997 Bible League International