Revised Common Lectionary (Semicontinuous)
ರಚನೆಗಾರ: ದಾವೀದ.
14 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು.
ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು.
ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ
ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ.
ಎಲ್ಲರೂ ಕೆಟ್ಟುಹೋಗಿದ್ದಾರೆ.
ಒಳ್ಳೆಯದನ್ನು ಮಾಡುವವನು ಇಲ್ಲ;
ಒಬ್ಬನಾದರೂ ಇಲ್ಲ.
4 ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ?
ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ.
ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5-6 ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ.
ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ.
ಆದರೆ ದೇವರು ನೀತಿವಂತರೊಂದಿಗಿದ್ದಾನೆ.
ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.
7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ?
ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ.
ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು;
ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.
13 ನಂತರ ಯೋವಾಬನು ಮತ್ತು ಅವನ ಜನರು ಅರಾಮ್ಯರ ಮೇಲೆ ಆಕ್ರಮಣ ಮಾಡಿದರು. ಯೋವಾಬ ಮತ್ತು ಅವನ ಜನರನ್ನು ಬಿಟ್ಟು ಅರಾಮ್ಯರು ಓಡಿಹೋದರು. 14 ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು.
ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.
ಅರಾಮ್ಯರು ಮತ್ತೆ ಯುದ್ಧ ಮಾಡಲು ತೀರ್ಮಾನಿಸಿದರು
15 ಇಸ್ರೇಲರು ತಮ್ಮನ್ನು ಸೋಲಿಸಿದರೆಂಬುದನ್ನು ಅರಾಮ್ಯರು ತಿಳಿದುಕೊಂಡರು. ಆದ್ದರಿಂದ ಅವರೆಲ್ಲರೂ ಒಟ್ಟಾಗಿ ಸೇರಿ ಒಂದು ದೊಡ್ಡ ಸೈನ್ಯವನ್ನು ಕಟ್ಟಿದರು. 16 ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
17 ಈ ವಿಷಯವು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಇಸ್ರೇಲರೆಲ್ಲರನ್ನೂ ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಹೇಲಾಮಿಗೆ ಹೋದನು.
ಅಲ್ಲಿ ಅರಾಮ್ಯರು ಯುದ್ಧಕ್ಕೆ ಸಿದ್ಧರಾಗಿ ಆಕ್ರಮಣ ಮಾಡಿದರು. 18 ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.
19 ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಆದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.
31 ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.
32 ಅದಕ್ಕೆ ಯೇಸು, “ನನ್ನಲ್ಲಿ ಆಹಾರವಿದೆ. ಆ ಆಹಾರದ ಬಗ್ಗೆ ನಿಮಗೇನೂ ಗೊತ್ತಿಲ್ಲ” ಎಂದನು.
33 ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.
34 ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ. 35 ‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ. 36 ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು. 37 ‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು. 38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International