Revised Common Lectionary (Semicontinuous)
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ಸೊಲೋಮೋನ.
127 ಯೆಹೋವನು ಮನೆಯನ್ನು ಕಟ್ಟದಿದ್ದರೆ,
ಕಟ್ಟುವವರ ಸಮಯವೆಲ್ಲಾ ವ್ಯರ್ಥ.
ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು
ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ.
ಯಾಕೆಂದರೆ ದೇವರು ತನ್ನ ಪ್ರಿಯರಿಗೆ
ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
3 ಮಕ್ಕಳು ಯೆಹೋವನ ಕೊಡುಗೆ.
ತಾಯಿಯ ಗರ್ಭಫಲವು ಆತನ ಬಹುಮಾನ.
4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ.
ಅವನಿಗೆ ಸೋಲೇ ಇಲ್ಲ.
ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
11 ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು! 12 ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು.
13 ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡುಮಗುವಿಗೆ ಜನ್ಮಕೊಟ್ಟಳು. 14 ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಇವನು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ. 15 ಅವನು ನಿನ್ನನ್ನು ಉಜ್ಜೀವಿಸಮಾಡುವನು. ವೃದ್ಧಾಪ್ಯದಲ್ಲಿ ನಿನ್ನ ಸಂರಕ್ಷಕನಾಗಿರಲಿ. ನಿನ್ನನ್ನು ಪ್ರೀತಿಸುವ ನಿನ್ನ ಸೊಸೆಯು ನಿನಗಾಗಿ ಈ ಮಗುವನ್ನು ಹೆತ್ತಿದ್ದಾಳೆ. ಅವಳು ನಿನಗೆ, ಏಳುಮಂದಿ ಗಂಡುಮಕ್ಕಳಿಗಿಂತಲೂ ಶ್ರೇಷ್ಠವಾಗಿದ್ದಾಳೆ” ಎಂದು ಹೇಳಿದರು.
16 ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟುಕೊಂಡು ಸಾಕಿಸಲುಹಿದಳು. 17 ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.
15 ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
16 ಒಬ್ಬನು ಸಾಯುವ ಮೊದಲೇ ಉಯಿಲನ್ನು[a] ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು. 17 ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ. 18 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು. 19 ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ[b] ಕವಲನ್ನು ಉಪಯೋಗಿಸಿದನು. 20 ಚಿಮುಕಿಸುವಾಗ, “ನೀವು ಅನುಸರಿಸಬೇಕೆಂದು ದೇವರು ಆಜ್ಞಾಪಿಸಿದ ಒಡಂಬಡಿಕೆಯನ್ನು ಈ ರಕ್ತ ದೃಢಪಡಿಸುತ್ತದೆ”(A) ಎಂದು ಹೇಳಿದನು. 21 ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು. 22 ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.
ಕ್ರಿಸ್ತನ ಯಜ್ಞವು ಪಾಪಗಳನ್ನು ದೂರತಳ್ಳಿತು
23 ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ. 24 ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.
Kannada Holy Bible: Easy-to-Read Version. All rights reserved. © 1997 Bible League International