Revised Common Lectionary (Semicontinuous)
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
132 ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೋ.
2 ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು;
ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.
3 “ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವ ತನಕ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ;
ನನ್ನ ಹಾಸಿಗೆಯ ಮೇಲೆ ಮಲಗಿಕೊಳ್ಳುವುದಿಲ್ಲ;
4 ನಾನು ನಿದ್ರಿಸುವುದೂ ಇಲ್ಲ;
ನನ್ನ ಕಣ್ಣುಗಳಿಗೆ ವಿಶ್ರಾಂತಿಯನ್ನು ಕೊಡುವುದೂ ಇಲ್ಲ.
5 ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು”
ಎಂದು ದಾವೀದನು ಹೇಳಿದನು.
6 ನಾವು ಅದರ ಬಗ್ಗೆ ಎಫ್ರಾತದಲ್ಲಿ ಕೇಳಿದೆವು.
ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಲ್ಲಿ ಕಂಡುಕೊಂಡೆವು.
7 ಬನ್ನಿರಿ, ಆತನ ಪವಿತ್ರ ಮಂದಿರಕ್ಕೆ ಹೋಗೋಣ;
ಆತನ ಪಾದಪೀಠದ ಮುಂದೆ ಆರಾಧಿಸೋಣ.
8 ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು.
ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.
9 ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಂಡಿದ್ದಾರೆ.
ನಿನ್ನ ಭಕ್ತರು ಉಲ್ಲಾಸಿಸಲಿ.
10 ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ.
ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ.
11 ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು.
ಆತನು ಅದನ್ನು ಬದಲಾಯಿಸುವುದೇ ಇಲ್ಲ.
“ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.
12 ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ,
ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”
13 ಯೆಹೋವನು ತನ್ನ ಆಲಯಕ್ಕಾಗಿ
ಚೀಯೋನನ್ನೇ ಆರಿಸಿಕೊಂಡನು.
14 “ಇದು ನನ್ನ ಶಾಶ್ವತ ನಿವಾಸಸ್ಥಾನ.
ನಾನು ಇಲ್ಲೇ ಆಸನಾರೂಢನಾಗಿರುವೆನು.
ಇದೇ ನನಗೆ ಇಷ್ಟವಾದ ಸ್ಥಳ.
15 ನಾನು ಚೀಯೋನಿಗೆ ಬೇಕಾದದ್ದನ್ನೆಲ್ಲಾ ಒದಗಿಸುವೆನು;
ಇಲ್ಲಿಯ ಬಡವರಿಗೂ ಆಹಾರವನ್ನು ಸಮೃದ್ಧಿಯಾಗಿ ದಯಪಾಲಿಸುವೆನು;
16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು.
ನನ್ನ ಭಕ್ತರು ಉಲ್ಲಾಸಿಸುವರು.
17 ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು.
ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.
18 ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು.
ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”
11 ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು. 12 ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು. 13 ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.
ಯೋಷೀಯನು ತನ್ನ ಜನರನ್ನು ಪ್ರವಾದಿಯಾದ ಹುಲ್ದಳ ಬಳಿಗೆ ಕಳುಹಿಸಿದನು
14 ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ[a] ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.
15 ಆಗ ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನ ಬಳಿಗೆ ಹೋಗಿ 16 ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ. 17 ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’
18-19 “ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ: 20 ‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು.
ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.
20 ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು. 21 ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು. 22 ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ. 23 ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು. 24 ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.
25 ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು. 26 ನಾಶವಾಗುವ ಕಡೆಯ ಶತ್ರುವೆಂದರೆ ಮರಣವೇ. 27 “ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ”(A) ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ. 28 ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.[a]
Kannada Holy Bible: Easy-to-Read Version. All rights reserved. © 1997 Bible League International