Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 80:1-2

ಸ್ತುತಿಗೀತೆ. ರಚನೆಗಾರ: ಆಸಾಫ.

80 ಇಸ್ರೇಲನ್ನು ಕಾಯುವ ಕುರುಬನೇ,
    ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ,
ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ,
    ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು.
    ಬಂದು ನಮ್ಮನ್ನು ರಕ್ಷಿಸು.

ಕೀರ್ತನೆಗಳು 80:8-19

ಹಿಂದಿನ ಕಾಲದಲ್ಲಿ ನೀನು ನಮ್ಮನ್ನು
    ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ.
ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ.
    ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.
“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ.
    ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ.
    ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
10 ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು.
    ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು.
11     ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು.
    ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು.
12 ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ?
    ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.
13 ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ.
    ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.
14 ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ.
    ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.
15 ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು.
    ನೀನು ಬೆಳೆಸಿದ ಎಳೆ ಸಸಿಯನ್ನು[a] ನೋಡು.
16 ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ.
    ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.

17 ನೀನು ಆರಿಸಿಕೊಂಡಿರುವಾತನ[b] ಕಡೆಗೆ ಕೈಚಾಚಿ ಸಹಾಯ ಮಾಡು.
    ನೀನು ಬೆಳೆಸಿದ ಜನರ[c] ಕಡೆಗೆ ಕೈಚಾಚು.
18 ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ.
    ನಮ್ಮನ್ನು ಬದುಕಿಸು.
    ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು.
19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ,
    ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.

ಯೆಶಾಯ 2:5-11

ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.

ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು. ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು. ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ. ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.

10 ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.

11 ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.

ಇಬ್ರಿಯರಿಗೆ 10:26-31

ಕ್ರಿಸ್ತನಿಂದ ದೂರ ಸರಿಯದಿರಿ

26 ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ. 27 ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ. 28 ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು. 29 ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು. 30 “ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.”(A) ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ. 31 “ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International