Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಲೂಕ 1:46-55

ಮರಿಯಳು ದೇವರನ್ನು ಸ್ತುತಿಸಿದಳು

46 ಆಗ ಮರಿಯಳು,

47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ.
    ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.
48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
    ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.
49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ.
    ಆತನ ಹೆಸರು ಅತಿ ಪರಿಶುದ್ಧವಾದದ್ದು.
50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
51 ಆತನು ತನ್ನ ಭುಜಬಲವನ್ನು ತೋರಿ
    ಗರ್ವಿಷ್ಠರನ್ನು ಚದರಿಸುತ್ತಾನೆ.
52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ
    ದೀನರನ್ನು ಉನ್ನತಿಗೇರಿಸುತ್ತಾನೆ.
53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ
    ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.
54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ
    ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ
55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.

ಯೆಶಾಯ 33:17-23

17 ನಿಮ್ಮ ಕಣ್ಣುಗಳು ಸೌಂದರ್ಯ ಪ್ರಭಾವಗಳಿಂದ ತುಂಬಿದ ರಾಜನನ್ನು (ದೇವರನ್ನು) ನೋಡುವವು. ನೀವು ಮಹಾ ದೊಡ್ಡ ದೇಶವನ್ನು ನೋಡುವಿರಿ. 18-19 ಹಿಂದಿನ ಕಾಲದಲ್ಲಿ ನೀವು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವಿರಿ. ನೀವು ಹೀಗೆ ಭಾವಿಸಿಕೊಳ್ಳುವಿರಿ: “ಬೇರೆ ದೇಶಗಳಿಂದ ಬಂದ ಜನರೆಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಭಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು, ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರೆಲ್ಲಿ? ಅವರೆಲ್ಲಾ ಹೋಗಿಬಿಟ್ಟರು. ನೀವೆಂದೂ ಆ ಜನರನ್ನು ಕಾಣದೆ ಇರುವಿರಿ.”

ದೇವರು ಜೆರುಸಲೇಮನ್ನು ರಕ್ಷಿಸುತ್ತಾನೆ

20 ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ. 21-23 ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.

ಪ್ರಕಟನೆ 22:6-7

ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ: ‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.

ಪ್ರಕಟನೆ 22:18-20

18 ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ. 19 ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.

20 ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ.

ಆಮೆನ್! ಪ್ರಭು ಯೇಸುವೇ, ಬಾ!

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International