Revised Common Lectionary (Semicontinuous)
ಪ್ರಾರ್ಥನೆ. ರಚನೆಗಾರ: ದಾವೀದ.
86 ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ.
ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು.
2 ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು!
ನಾನು ನಿನ್ನ ಸೇವಕನು, ನೀನು ನನ್ನ ದೇವರು.
ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು.
3 ನನ್ನ ಯೆಹೋವನೇ, ನನಗೆ ಕರುಣೆತೋರು.
ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ.
4 ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ.
ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು.
5 ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ.
ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು.
ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.
6 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು.
ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು.
7 ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ.
ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ.
8 ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ.
ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು.
9 ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ.
ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ.
ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.
10 ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ!
ನೀನೇ, ಹೌದು, ನೀನೊಬ್ಬನೇ ದೇವರು!
ಬೇತೇಲಿನಲ್ಲಿ ಯಾಕೋಬನು
35 ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.
2 ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ. 3 ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.
4 ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.
ಅಪೊಸ್ತಲರನ್ನು ತಡೆಯಲು ಯೆಹೂದ್ಯರ ಪ್ರಯತ್ನ
17 ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು. 18 ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು. 19 ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ, 20 “ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು. 21 ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು.
ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು. 22 ದೇವಾಲಯದ ಸಿಪಾಯಿಗಳು ಸೆರೆಮನೆಗೆ ಹೋದಾಗ ಅಲ್ಲಿ ಅಪೊಸ್ತಲರನ್ನು ಕಾಣಲಿಲ್ಲ. ಆದ್ದರಿಂದ ಅವರು ಹಿಂತಿರುಗಿ ಬಂದು ಯೆಹೂದ್ಯನಾಯಕರಿಗೆ, 23 “ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು. 24 ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.
25 ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು. 26 ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.
Kannada Holy Bible: Easy-to-Read Version. All rights reserved. © 1997 Bible League International