Revised Common Lectionary (Semicontinuous)
ಐದನೆಯ ಭಾಗ
(ಕೀರ್ತನೆಗಳು 107–150)
107 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು!
ಆತನ ಪ್ರೀತಿ ಶಾಶ್ವತವಾದದ್ದು!
2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ.
ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು;
ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು.
ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
5 ಅವರು ಹಸಿವೆಯಿಂದಲೂ
ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.
6 ಆಗ ಅವರು ಯೆಹೋವನಿಗೆ ಮೊರೆಯಿಡಲು
ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು;
ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.
34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು,
ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.
35 ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು;
ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು.
36 ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು.
ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು.
37 ಅವರು ಹೊಲಗಳಲ್ಲಿ ಬೀಜ ಬಿತ್ತಿ
ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.
ಜೆರಿಕೊದಲ್ಲಿ ಗೂಢಚಾರರು
2 ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ.
“ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು.
ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”
2 ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.
3 ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.
4 ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ. 5 ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟುಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು. 6 ಆದರೆ ಅವಳು ನಿಜವಾಗಿ ಆ ಗೂಢಚಾರರನ್ನು ಮಾಳಿಗೆಯ[a] ಮೇಲೆ ಕರೆದುಕೊಂಡು ಹೋಗಿ ಒಟ್ಟಿದ ಹುಲ್ಲಿನಲ್ಲಿ ಅವರನ್ನು ಅಡಗಿಸಿಟ್ಟಿದ್ದಳು.
7 ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.
8 ಆ ಇಬ್ಬರು ಗೂಢಚಾರರು ಆ ರಾತ್ರಿ ಅಲ್ಲಿಯೇ ಮಲಗಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ರಾಹಾಬಳು ಮಾಳಿಗೆಯ ಮೇಲೆ ಹೋಗಿ ಅವರೊಂದಿಗೆ ಮಾತನಾಡಿ, 9 “ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ. 10 ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ. 11 ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ. 12 ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದ್ದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ. 13 ನನ್ನ ಕುಟುಂಬದವರನ್ನು ಅಂದರೆ ನನ್ನ ತಂದೆತಾಯಿಗಳನ್ನು, ಸಹೋದರ ಸಹೋದರಿಯರನ್ನು ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಬೇಡಿಕೊಂಡಳು.
14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.
ಸುಳ್ಳುಬೋಧಕರು
2 ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ. 2 ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ. 3 ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
Kannada Holy Bible: Easy-to-Read Version. All rights reserved. © 1997 Bible League International