Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 89:1-4

ರಚನೆಗಾರ: ಜೇರಹ ಕುಟುಂಬದ ಏತಾನ.

89 ಯೆಹೋವನೇ, ನಿನ್ನ ಪ್ರೀತಿಯನ್ನೂ
    ನಂಬಿಗಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು!
ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ.
    ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.

ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು.
    ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ,
‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು,
    ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’”

ಕೀರ್ತನೆಗಳು 89:19-26

19 ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ:
    “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ.
ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು
    ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.
20 ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ.
    ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.
21 ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲ ನೀಡಿದೆ,
    ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ.
22 ನಾನು ಆರಿಸಿಕೊಂಡ ರಾಜನನ್ನು ಸೋಲಿಸಲು ಶತ್ರುವಿಗೆ ಆಗಲಿಲ್ಲ.
    ಅವನನ್ನು ಸೋಲಿಸಲು ದುಷ್ಟಜನರಿಗೆ ಆಗಲಿಲ್ಲ.
23 ನಾನು ಅವನ ಶತ್ರುಗಳನ್ನು ಮುಗಿಸಿದೆನು.
    ನಾನು ಆರಿಸಿಕೊಂಡ ರಾಜನ ಮೇಲೆ ದ್ವೇಷಕಾರಿದ ಜನರನ್ನು ಸೋಲಿಸಿದೆನು.
24 ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೆ ಬೆಂಬಲ ನೀಡುವೆನು.
    ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.
25 ನಾನು ಆರಿಸಿಕೊಂಡ ರಾಜನನ್ನು ಸಮುದ್ರದ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು.
    ಅವನು ನದಿಗಳನ್ನು ಹತೋಟಿಯಲ್ಲಿಡುವನು.
26 ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು.
    ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.

2 ಸಮುವೇಲನು 6:12-19

12 ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು. 13 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು. 14 ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.

15 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು. 16 ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.

17 ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

18 ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. 19 ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

ಇಬ್ರಿಯರಿಗೆ 1:5-14

ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ:

“ನೀನು ನನ್ನ ಮಗ;
    ಈ ದಿನ ನಾನು ನಿನ್ನ ತಂದೆಯಾದೆನು.”(A)

ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ:

“ನಾನು ಅವನ ತಂದೆಯಾಗಿರುವೆನು,
    ಅವನು ನನ್ನ ಮಗನಾಗಿರುವನು.”(B)

ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ,

“ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”[a]

ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ:

“ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು.
    ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”(C)

ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು:

“ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು.
    ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.
ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ.
    ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು
    ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”(D)

10 ಇದಲ್ಲದೆ ದೇವರು ಹೀಗೆನ್ನುತ್ತಾನೆ:

“ಪ್ರಭುವೇ, ಆದಿಯಲ್ಲಿ ನೀನು ಈ ಲೋಕವನ್ನು ಸೃಷ್ಟಿಸಿದೆ.
    ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
11 ಇವೆಲ್ಲವು ನಾಶವಾಗುತ್ತವೆ, ಆದರೆ ನೀನು ಶಾಶ್ವತವಾಗಿರುವೆ.
    ಎಲ್ಲಾ ವಸ್ತುಗಳೂ ವಸ್ತ್ರಗಳಂತೆ ಹಳೆಯವಾಗುವವು.
12 ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ.
    ಅವು ವಸ್ತ್ರಗಳಂತೆ ಬದಲಾಗುತ್ತವೆ.
ಆದರೆ ನೀನು ಎಂದೆಂದಿಗೂ ಬದಲಾಗುವುದಿಲ್ಲ.
    ನಿನ್ನ ಜೀವಕ್ಕೆ ಅಂತ್ಯವೆಂಬುದಿಲ್ಲ.”(E)

13 ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ:

“ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ,
    ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.”(F)

14 ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International